ಕನಕ ದಾಸ ಜಯಂತಿ 2023 | Kanakadasa Jayanthi Speech in Kannada

kanakadasa jayanthi speech in kannada । ಕನಕ ದಾಸ ಜಯಂತಿ 2021

kanakadasa jayanthi speech in kannada, ಕನಕ ದಾಸ ಜಯಂತಿ 2023, Kanakadasa Jayanthi Festival Celebration 2023,Kanakadasa Information in Kannada

kanakadasa jayanthi speech in kannada 2023

Spardhavani Telegram

ಶ್ರೀ ಕನಕದಾಸರುಮೂಲ ಹೆಸರು -ತಿಮ್ಮಪ್ಪನಾಯಕ ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು.


ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು.


ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.


ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ.

ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.

Kanakadasa Jayanthi Speech in Kannada

ಕನಕ ದಾಸ ಜನನ

220px Kanakadasa art
ಕನಕ ದಾಸ ಜಯಂತಿ 2023

ದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509 ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು.

ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು.

15 -16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು.

ಕನಕ ​​ದಾಸ (1509 – 1609) ಒಬ್ಬ ಹರಿದಾಸ, ಕರ್ನಾಟಕ ಸಂಗೀತದ ಹೆಸರಾಂತ ಸಂಯೋಜಕ, ಕವಿ, ತತ್ವಜ್ಞಾನಿ ಮತ್ತು ಸಂಗೀತಗಾರ.

ಕನಕ ದಾಸರ ಇತಿಹಾಸ

ಇತರ ಹರಿದಾಸರಂತೆ , ಅವರು ತಮ್ಮ ರಚನೆಗಳಿಗೆ ಸರಳ ಕನ್ನಡ ಭಾಷೆ ಮತ್ತು ಸ್ಥಳೀಯ ಮೆಟ್ರಿಕ್ ರೂಪಗಳನ್ನು ಬಳಸಿದರು.

ಕನಕದಾಸರ ಜಯಂತಿಯನ್ನು ಅವರ ಮಹಾನ್ ಕವಿ, ಸಂತ, ದಾರ್ಶನಿಕ, ಸಂಯೋಜಕ ಮತ್ತು ಸಂಗೀತಗಾರರ ಸ್ಮರಣೆಯಂದು ಆಚರಿಸಲಾಗುತ್ತದೆ .

ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹೆಸರು ಬಾಡ ಎಂದು.

ವಿಜಯನಗರದಿಂದ ಗೋವಾಕ್ಕೆ ಹೋಗುವ ಹೆದ್ದಾರಿ. ಈ ಬಾಡದಿಂದಲೇ ಹಾಯ್ದು ಹೋಗುತ್ತಿತ್ತು.

ಬಾಡ ಒಳ್ಳೇ ಆಯಕಟ್ಟಿನ ಸ್ಥಳ. ಈ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕ, ಬೀರಪ್ಪನಾಯಕ. (ಡಣ್ಣಾಯಕ ಎಂದರೆ ಆಯಕಟ್ಟಿನ ಸ್ಥಳದಲ್ಲಿ ಕಾದಿಟ್ಟ ಸೈನ್ಯದ ದಳಕ್ಕೆ ಸೇನಾಪತಿ ಎಂದು ನೇಮಿಸಲ್ಪಟ್ಟವನು) ಬೀರಪ್ಪನ ಹೆಂಡತಿ ಬಚ್ಚಮ್ಮ.

Kanakadasa Jayanthi Speech in Kannada

ಬೀರಪ್ಪನಾಯಕನಿಗೆ ತಿರುಪತಿ ತಿಮ್ಮಪ್ಪನಲ್ಲಿ ಬಹು ನಂಬಿಕೆ. ದಕ್ಷಿಣದಲ್ಲಿ ಸುಮಾರು ಒಂಬೈನೂರು ವರ್ಷಗಳ ಹಿಂದೆ ಶ್ರೀರಾಮಾನುಜಾಚಾರ್ಯರೆಂಬ ದೊಡ್ಡ ಗುರುಗಳು ಪ್ರಸಿದ್ಧರಾಗಿದ್ದರು.

ಅವರು ಸ್ಥಾಪಿಸಿದ ಪಂಥಕ್ಕೆ ಶ್ರೀವೈಷ್ಣವ ಮತವೆಂದು ಹೆಸರು. ಡಣ್ಣಾಯಕ ಬೀರಪ್ಪನಾಯಕ ಮತ್ತು ಆತನ ಮಡದಿ ಬಚ್ಚಮ್ಮ ಇವರು ಶ್ರೀ ವೈಷ್ಣವ ಮತಕ್ಕೆ ಶರಣು ಹೋಗಿದ್ದರು. ಅಂದಿನಿಂದ ಇವರು ಸಹ ತಿರುಪತಿ ವಂಕಟೇಶ್ವರ ಸ್ವಾಮಿಯನ್ನೇ ತಮ್ಮ ಆರಾಧ್ಯ ದೈವವನ್ನಾಗಿ ಮಾಡಿಕೊಂಡರು.

ಕನಕ ದಾಸ ಜಯಂತಿ 2023

kanakadasajayanthi001

ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಅನೇಕ ದಿನಗಳಿಂದ ಒಂದು ಹಂಬಲವಿತ್ತು. ಅದೇನೆಂದರೆ, ತಮಗೆ ಒಬ್ಬ ಕುಲದೀಪಕನಾದ ಮಗ ಜನಿಸಬೇಕು ಎಂದು. “ವಂಶೋದ್ಧಾರಕನಾದ ಒಬ್ಬ ಮಗನನ್ನು ಕರುಣಿಸು” ಎಂದು ಈ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದರು.

ಅವರ ಆಸೆ ಫಲಿಸಿತು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಂದೆ ತಾಯಿಗಳಿಗೆ ಆನಂದವೋ ಆನಂದ. ತಿರುಪತಿ ತಿಮ್ಮಪ್ಪನ ಆಶೀರ್ವಾದ ಎಂದು ಅವರು ತಮ್ಮ ಮಗುವಿಗೆ “ತಿಮ್ಮಪ್ಪ” ಎಂದೇ ನಾಮಕರಣ ಮಾಡಿದರು.

ತಿಮ್ಮಪ್ಪ ಜನಿಸಿದ ಕಾಲ ಇಂತದ್ದೇ ಎಂದು ತಿಳಿಯದು; ಹದಿನೈದನೇಯ ಶತಮಾನದ ಕೊನೆಯ ವರ್ಷಗಳಲ್ಲಿ ಹುಟ್ಟಿದರು ಎಂದು ಹೇಳಬಹುದು.

kanakadasa jayanthi speech in kannada

ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿದನಷ್ಟೆ. ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ಬಂಕಾಪುರದ ಶ್ರೀನಿವಾಸಾಚಾರ್ಯರ ಬಳಿ ವಿದ್ಯಾಭ್ಯಾಸವಾಗಿ, ವ್ಯಾಕರಣ, ತರ್ಕ, ಮೀಮಾಂಸೆ, ಸಾಹಿತ್ಯಗಳಲ್ಲಿ ಪಾರಂಗತನಾದನು. ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ.

ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕನಾದ.

ಕನಕ ದಾಸರು ತಮ್ಮನ್ನು ತಾವೇ ಸಾವಿನ ದೇವತೆಯಾದ ಯಮನೆಂದು ತಮ್ಮ ಕೃತಿಗಳಲ್ಲಿ ಉಲ್ಲೇಖಿಸಿದ್ದಾರೆ.

ಸಾಹಿತ್ಯ ರಚನೆ

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:

Kanakadasa Jayanthi Speech in Kannada

ಮೋಹನತರಂಗಿಣಿ
ನಳಚರಿತ್ರೆ

ರಾಮಧಾನ್ಯ ಚರಿತೆ
ಹರಿಭಕ್ತಿಸಾರ

ನೃಸಿಂಹಸ್ತವ (ಉಪಲಬ್ದವಿಲ್ಲ)

ಕನಕ ದಾಸರ ಮರಣ

ಮರಣ 1609 ಬಾಡ

ಇತರೆ ಪ್ರಬಂಧಗಳನ್ನು ಓದಿ

Leave a Reply

Your email address will not be published. Required fields are marked *